ಧಾರವಾಡ 25 :
ಸಾಂಪ್ರದಾಯಿಕ ಹೋಳಿ ಹುಣ್ಣಿಮೆ ಹಬ್ಬದ ಸಡಗರ ಸಂಭ್ರಮ ಧಾರವಾಡದಲ್ಲಿ ಜೋರಾಗಿಯೇ ನಡೆದಿದ್ದು ಧಾರವಾಡ ಜಿಲ್ಲಾಡಳಿತದ ಅಧಿಕಾರಿಗಳು ಪರಸ್ಪರ ಬಣ್ಣಗಳನ್ನು ಎರಚಿ ಹೋಳಿ ಆಚರಣೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ಧಾರವಾಡ ನಗರದ ಕರ್ನಾಟಕ ರಾಜ್ಯ ನೌಕರರ ಸಂಘದ ಆವರಣದಲ್ಲಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು , ಜಿಲ್ಲಾ ಆರೋಗ್ಯ ಅಧಿಕಾರಿ ಶಶಿ ಪಾಟೀಲ , ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್ ಸಿದ್ದನಗೌಡರ ಸೇರಿದಂತೆ ಹಲವರು ಪರಸ್ಪರ ಬಣ್ಣ ಹಚ್ಚಿ ಹೋಳಿ ಹಬ್ಬ ಆಚರಣೆ ಮಾಡಿದರು . ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಪುಠಾಣಿ ಮಕ್ಕಳು ಸಹ ಬಣ್ಣ ಹಚ್ಚಿ ಸಂಭ್ರಮಿಸಿದರು . ಅಧಿಕಾರಿಗಳು ಪರಸ್ಪರ ಬಣ್ಣಗಳನ್ನು ಎರಚಿ ಹೋಳಿ ಹಬ್ಬ ಸಡಗರಕ್ಕೆ ಇಮ್ಮಡಿಗೊಳಿಸಿದರು.
Share