ಮಾಜಿ ಸಚಿವ ರೇವಣ್ಣಗೆ ಬೇಲಾ, ಮತ್ತೆ ಜೈಲಾ?: ಇಂದು ತೀರ್ಮಾನ

Share
0Shares

FASTNEWS

MAY 20, 2024

ಬೆಂಗಳೂರು: ಹೊಳೆ ನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಕುರಿತ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದ್ದು, ರೇವಣ್ಣಗೆ ಮತ್ತೆ ಜೈಲಾ ಅಥವಾ ಬೇಲಾ ಅನ್ನೋದು ಇಂದು ತೀರ್ಮಾನವಾಗಲಿದೆ.

ಶುಕ್ರವಾರ ಎರಡೂ ಬದಿಯ ವಕೀಲರ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು, ಇಂದಿಗೆ ಆದೇಶ ಕಾಯ್ದಿರಿಸಿದ್ದರು.

47 ವರ್ಷದ ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ಪ್ರಕರಣ ದಾಖಲಾಗಿತ್ತು. ಶಾಸಕರ ನಿವಾಸದಲ್ಲಿ ತಂದೆ ಮತ್ತು ಮಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಬಳಿಕ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣವೂ ದಾಖಲಾಗಿತ್ತು.

ದೇವರಾಜೇಗೌಡ ಇಂದು ಸಂಜೆ‌ ಕೋರ್ಟ್ ‌ಮುಂದೆ ಹಾಜರು

ಇವತ್ತು ಹಾಸನಕ್ಕೆ ದೇವರಾಜೇಗೌಡರನ್ನು ಎಸ್‌ಐಟಿ ಅಧಿಕಾರಿಗಳು ಕರೆತರಲಿದ್ದಾರೆ. ಸಂಜೆ‌ ಕೋರ್ಟ್ ‌ಮುಂದೆ ಹಾಜರುಪಡಿಸುವ ಮುನ್ನ ಹಾಸನದಲ್ಲಿ ವಿಚಾರಣೆ ಮಾಡುವ ಸಾಧ್ಯತೆಯಿದೆ. ಹಾಸನದಲ್ಲಿರುವ ದೇವರಾಜೇಗೌಡ ನಿವಾಸ, ಕಛೇರಿಯಲ್ಲಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ದೇವರಾಜೇಗೌಡರನ್ನ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282