ಮಹಿಳಾ ಅಧಿಕಾರಿಗಳಿಂದ ಪ್ರಜ್ವಲ್ ಅರೆಸ್ಟ್: ಯಾಕೆ ?

Share
0Shares

FASTNEWS

MAY 31, 2024

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದಡಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿ ಎಸ್ ಐಟಿ ಕಚೇರಿಗೆ ಕರೆತಂದಿದ್ದಾರೆ.

ಈ ವೇಳೆ ಎಸ್ಐಟಿ ಅಧಿಕಾರಿಗಳು ಮಹಿಳಾ ಪೊಲೀಸರನ್ನೇ ಕಳುಹಿಸಿ ಪ್ರಜ್ವಲ್ ಅವರನ್ನು ಬಂಧಿಸಿದ್ದಾರೆ. ಮೂವರು ಮಹಿಳಾ ಅಧಿಕಾರಿಗಳ ಮೂಲಕ ಆರೋಪಿಯನ್ನು ಎಸ್ ಐಟಿ ಬಂಧಿಸಿದೆ. ಅದು ಯಾಕೆ ಎಂಬ ಬಗ್ಗೆ ಚರ್ಚೆ ಶುರುವಾಗಿದೆ. ಜೀಪ್ ಚಾಲಕ ಹೊರತು ಪಡಿಸಿದರೆ ಉಳಿದವರೆಲ್ಲಾ ಮಹಿಳಾ ಅಧಿಕಾರಿಗಳು, ಸಂಸದನ ಬಂಧನ ಸಂದರ್ಭದಲ್ಲಿದ್ದರು. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಮುಜುಗರ ಉಂಟುಮಾಡುವ ನಿಟ್ಟಿನಲ್ಲಿ ಬಂಧನವಾಗಿದೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೇ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಬೇಕು. ನಾವಿದ್ದೇವೆ ಧೈರ್ಯವಾಗಿ ಬಂದು ದೂರು ನೀಡುವಂತೆ ಸಂದೇಶ ರವಾನಿಸಬೇಕು ಎಂಬ ನಿಟ್ಟಿನಲ್ಲಿ ಮಹಿಳಾ ಅಧಿಕಾರಿಗಳಿಂದ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282