ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ..!

Share
0Shares

FASTNEWS

JULY 8, 2024

ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್​ ಕೆ ಜಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್​ ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿದ್ದಾರೆ. ಇದನ್ನು ಗಮಿಸಿದ ಸ್ಥಳೀಯರು ಪ್ರತಾಪ್ ಕುಮಾರ್​ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ.

ದಾವಣಗೆರೆ ಕತ್ತಲಗೆರೆ ಗ್ರಾಮದ ಮೃತ ಪ್ರತಾಪ್ ಕುಮಾರ್, 15 ವರ್ಷದ ಹಿಂದೆ ಬಿಸಿ ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯಳನ್ನು ಮದುವೆಯಾಗಿದ್ದರು. ಆದ್ರೆ, ಇದೀಗ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282