ದರ್ಶನ್ & ಗ್ಯಾಂಗ್ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಏನಿದೆ?

Share
0Shares

FAST NEWS

SEPTEMBER 4, 2024

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ ಒಂದು ಬಾಕ್ಸ್ ನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.


ಚಾರ್ಜ್ ಶೀಟ್ ನಲ್ಲಿ ಒಟ್ಟಾರೆ 231 ಸಾಕ್ಷಿಗಳ ಉಲ್ಲೇಖ ಮಾಡಲಾಗಿದೆ. 27 ಜನ ಸಾಕ್ಷಿ, ನ್ಯಾಯಾಧೀಶರ ಮುಂದೆ 164, ಪ್ರತ್ಯೇಕ್ಷ ಸಾಕ್ಷಿದಾರರು ಮೂರು, ಐ ವಿಟ್ನೆಸ್ 03, ಸಿಎಫ್ ಎಸ್ ಎಲ್ 8, 59 ಮಂದಿ ಪಂಚರ ಸಾಕ್ಷಿ, ಪೊಲೀಸರು – 56, ಸರ್ಕಾರಿ ಅಧಿಕಾರಿಗಳು – 8, ಎಫ್ ಎಸ್ ಎಲ್, ಸಿಎಫ್ ಎಸ್ ಎಲ್ 08, ಪ್ರತ್ಯಕ್ಷ ಸಾಕ್ಷಿಗಳು 03, ಪೊಲೀಸ್ರ ಎದುರು ಸಿಆರ್ ಪಿಸಿ 161 ಅಡಿ ಹೇಳಿಕೆ ದಾಖಲಿಸಿದ ವ್ಯಕ್ತಿಗಳು 97, ನ್ಯಾಯಾಧೀಶರ ಮುಂದೆ 164 ಹೇಳಿಕೆಯನ್ನು 27 ಮಂದಿ ದಾಖಲಿಸಿದ್ದಾರೆ.

ಚಾರ್ಜ್ಶೀಟ್ನಲ್ಲಿ ಆರೋಪಿಗಳನ್ನು ಯಥಾಸ್ಥಿತಿಯಲ್ಲಿ ಉಲ್ಲೇಖ ಮಾಡಲಾಗಿದೆ. ಪವಿತ್ರಗೌಡ -ಎ1, ದರ್ಶನ್ ಎ-2, 14 ಜನರ ಮೇಲೆ ಕೊಲೆ ಆರೋಪ, 14 ಜನರು ಮೇಲೂ ಅಪಹರಣ ಮತ್ತು ಕೊಲೆ ಆರೋಪ, ಮೂರು ಆರೋಪಿಗಳ ಮೇಲೆ ಮಾತ್ರ ಸಾಕ್ಷ್ಯ ನಾಶ ಕೇಸ್ ದಾಖಲಿಸಿರುವ ಬಗ್ಗೆ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವಮೂರ್ತಿ, ನಿಖಿಲ್ ನಾಯಕ್ ಈ ಮೂವರ ಮೇಲೆ ಮಾತ್ರ ಸಾಕ್ಷಿ ನಾಶ ಪ್ರಕರಣ ದಾಖಲಾಗಿದೆ.


ಕಿಡ್ನ್ಯಾಪ್, ಕೊಲೆ, ಸಾಕ್ಷಿ ನಾಶ, ಒಳಸಂಚು, ದರೋಡೆ, ಕಾನೂನುಬಾಹಿರ ಗುಂಪುಗಾರಿಕೆ ಪ್ರಕರಣ ದಾಖಲಾಗಿದೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282