ಒಂದು ದೇಶ ಒಂದು ಚುನಾವಣೆಯಿಂದ ಕೋಟ್ಯಂತರ ಹಣ ಉಳಿತಾಯ: ಅಶೋಕ್

Share
0Shares

FAST NEWS

September 18, 2024

ಬೆಂಗಳೂರು: ಒಂದು ದೇಶ ಒಂದು ಚುನಾವಣೆಯಿಂದ ಅನಗತ್ಯ ವೆಚ್ಚ ಉಳಿಯಲಿದೆ. ಬಹಳ ಹಿಂದೆಯೇ ಈ ತೀರ್ಮಾನ ಮಾಡಬೇಕಿತ್ತು. ಈಗಲಾದರೂ ಈ ನಿರ್ಧಾರ ಮಾಡಲಾಗಿದೆ. ಇದನ್ನು ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.


ಒಂದು ದೇಶ ಒಂದು ಚುನಾವಣೆಗೆ ಕೇಂದ್ರದಿಂದ ಒಪ್ಪಿಗೆ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆಗೆ ಕೇಂದ್ರದಿಂದ ಒಪ್ಪಿಗೆ ಸಿಕ್ಕಿದೆ. ಮುಂದಿನ ಅಧಿವೇಶನದಲ್ಲಿ ಇದರ ಮಸೂದೆ ಮಂಡನೆ ಆಗಲಿದೆ. ಕೇಂದ್ರ ಸರ್ಕಾರದ ನಡೆಯನ್ನು ಸ್ವಾಗತ ಮಾಡುತ್ತೇವೆ. ಇದರಿಂದ ಕೋಟ್ಯಂತರ ಹಣ ಉಳಿತಾಯ ಆಗಲಿದೆ ಎಂದರು.


ವಿಪಕ್ಷಗಳು ಒಂದು ದೇಶ ಒಂದು ಚುನಾವಣೆ ವಿರೋಧ ಮಾಡುತ್ತಿವೆ. ವಿಪಕ್ಷಗಳಿಗೆ ಮೋದಿಯವರ ಭಯ ಇದೆ. ಮತ್ತೆ ಮೋದಿಯವರೇ ಗೆದ್ದು ಬರುತ್ತಾರೆ ಅಂತ ಭಯ. ಹೀಗಾಗಿ ವಿಪಕ್ಷಗಳು ವಿರೋಧ ಮಾಡುತ್ತಿವೆ ಎಂದು ಲೇವಡಿ ಮಾಡಿದರು

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282