ಬಿಜೆಪಿಯಿಂದ 8 ಶಾಸಕರು ಕಾಂಗ್ರೆಸ್‌ ಸೇರ್ತಾರೆ: ಸೋಮಶೇಖರ್‌ ಹೇಳಿಕೆಗೆ ಶಿವರಾಮ್‌ ಹೆಬ್ಬಾರ್‌ ಸಹಮತ

Share
0Shares

ಕಾರವಾರ: ಬಿಜೆಪಿಯಿಂದ 8 ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಎಸ್.ಟಿ.ಸೋಮಶೇಖರ್ ಹೇಳಿಕೆ ಬೆನ್ನಲ್ಲೇ ಇದೀಗ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಬಿನ್ನಮತೀಯ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರುವ ಕುರಿತು ಸುಳಿವು ನೀಡಿದ್ದಾರೆ.

ಯಲ್ಲಾಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಸ್‌.ಟಿ‌.ಸೋಮಶೇಖರ್ ಮಾತು ಸತ್ಯ ಇರಬಹುದು. ಸೋಮಶೇಖರ್ ಅವರ ಮಾತು ನೋಡಿದರೆ ಅವರಿಗೆ ಖಚಿತ ಮಾಹಿತಿ ಇರಬಹುದು. ಹಾಗಾಗಿ, ಸೋಮಶೇಖರ್ ಮಾತಿನಲ್ಲಿ ಸತ್ಯತೆ ಇರುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಲು ಸೋಮಶೇಖರ್ ಅವರಿಗೆ ಪೋನ್ ಕರೆ ಮಾಡಿದ್ದೆ, ಆದ್ರೆ ಕರೆಗೆ ಸಿಕ್ಕಿಲ್ಲ. ನಾನು ಬಿಜೆಪಿಯಿಂದ ಒಂದು ಕಾಲನ್ನು ಹೊರಗೆ ಇಟ್ಟಿದ್ದೇನೆ ಅಂತಾನಾದ್ರೂ ಬರೆದುಕೊಳ್ಳಿ, ಎರಡು ಕಾಲು ಹೊರಗೆ ಇಟ್ಟಿದ್ದೇನೆ ಅಂತಾನಾದ್ರೂ ಬರೆದುಕೊಳ್ಳಿ, ನಿಮ್ಮ ವಿವೇಚನೆಗೆ ಸೇರಿದ್ದು. ನಮ್ಮ ನಿರ್ಣಯ ನಮ್ಮ ಮುಖಂಡರ ಜತೆ ಚರ್ಚೆ ಮಾಡಿ ತೆಗೆದುಕೊಳ್ಳುತ್ತೇನೆ. ಇದು ರಾಜಕಿಯ ಕ್ಷೇತ್ರ, ಯಾವ ಸಂದರ್ಭ, ಯಾವ ನಿರ್ಣಯ ಕೈಗೊಳ್ಬೇಕು ಎಂಬುದು ನಮಗೆ ಗೊತ್ತು ಎಂದು ತಿಳಿಸಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282