ಸಂವಿಧಾನ ಪೀಠಿಕೆ: ‘ಸಮಾಜವಾದ’, ‘ಜಾತ್ಯತೀತ’ ಸೇರ್ಪಡೆ ಪ್ರಶ್ನಿಸಿದ್ದ ಅರ್ಜಿ ವಜಾ

Share
0Shares
 ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಎಂಬ ಪದಗಳನ್ನು ಸೇರಿಸಿದ 1976ರ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. 1976ರಲ್ಲಿ ತುರ್ತು ಪರಿಸ್ಥಿತಿಯ ವೇಳೆ 42ನೇ ತಿದ್ದುಪಡಿ ಮೂಲಕ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಎಂಬ ಪದಗಳನ್ನು ಸಂವಿಧಾನದ ಪೀಠಿಕೆಯಲ್ಲಿ ಸೇರಿಸಲಾಗಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಹಿರಿಯ ನಾಯಕ ಡಾ.ಸುಬ್ರಮಣಿಯನ್ ಸ್ವಾಮಿ, ಬಲರಾಮ್ ಸಿಂಗ್ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ಕುರಿತಾದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ನ್ಯಾಯಪೀಠ ನವೆಂಬರ್ 22ರಂದು ಕಾಯ್ದಿರಿಸಿತ್ತು. ಈ ಅರ್ಜಿಗಳ ಬಗ್ಗೆ ವಿವರವಾದ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಪೀಠ ಹೇಳಿದೆ. ಸಂವಿಧಾನವನ್ನು ತಿದ್ದುಪಡಿ ಮಾಡುವ ಅಧಿಕಾರ ಸಂಸತ್ತಿಗೆ ಇದೆ. ತಿದ್ದುಪಡಿಯಾಗಿ ಹಲವು ವರ್ಷಗಳು ಕಳೆದಿದ್ದು, ಈಗ ಅದನ್ನು ರದ್ದುಪಡಿಸಲಾಗದು ಎಂಬುದನ್ನು ಈಗಾಗಲೇ ವಿವರಿಸಲಾಗಿದೆ ಎಂದು ಹೇಳಿ ಅರ್ಜಿಯನ್ನು ಪೀಠ ವಜಾಗೊಳಿಸಿತು.

 

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282