0Shares
Post Views: 86
ಉತ್ತರಪ್ರದೇಶ: ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃ*ತಪಟ್ಟಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮೃ*ತಪಟ್ಟವರನ್ನು ವಿವೇಕ್ ಮತ್ತು ಅಮಿತ್ ಎನ್ನಲಾಗಿದ್ದು ಇನ್ನೋರ್ವನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ವಿವೇಕ್ ಹಾಗೂ ಅಮಿತ್ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಲು ಶನಿವಾರ ಬಾಡಿಗೆ ಕಾರೊಂದನ್ನು ಗೊತ್ತುಪಡಿಸಿ ಗುರುಗ್ರಾಮದಿಂದ ಉತ್ತರಪ್ರದೇಶದ ಬರೇಲಿಗೆ ಹೊರಟಿದ್ದರು ಈ ವೇಳೆ ಮಾರ್ಗ ಸರಿಯಾಗಿ ಗೊತ್ತಿರದ ಕಾರಣ ಚಾಲಕ ಗೂಗಲ್ ಮ್ಯಾಪ್ ಮೊರೆ ಹೋಗಿದ್ದು ಅದರಂತೆ ಬರೇಲಿ ಸಮೀಪದ ನಿರ್ಮಾಣ ಹಂತದ ಸೇತುವೆಯ ದಾರಿ ತೋರಿಸಿದೆ ಅದರಂತೆ ಕಾರು ಚಾಲಕ ಅದೇ ಮಾರ್ಗವನ್ನು ಅನುಸರಿಸಿಕೊಂಡು ಹೋಗಿದ್ದಾನೆ ಆದರೆ ಸೇತುವೆ ಅಪೂರ್ಣಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ಸುಮಾರು ಐವತ್ತು ಅಡಿ ಆಳದ ರಾಮಗಂಗಾ ನದಿಗೆ ಬಿದ್ದಿದೆ ಅಷ್ಟೋತ್ತಿಗಾಗಲೇ ರಾತ್ರಿಯಾಗಿದ್ದ ಕಾರಣ ವಿಚಾರ ಯಾರಿಗೂ ಗೊತ್ತಾಗಿಲ್ಲ ಮರುದಿನ ಭಾನುವಾರ ಬೆಳಿಗ್ಗೆ ಅಲ್ಲಿನ ಸ್ಥಳೀಯರು ನದಿಗೆ ಬಿದ್ದಿರುವ ಕಾರೊಂದನ್ನು ಗಮನಿಸಿದ್ದಾರೆ ಬಳಿಕ ಕಾರಿನ ಬಳಿ ತೆರಳಿದ್ದಾರೆ ಈ ವೇಳೆ ಕಾರಿನಲ್ಲಿ ಮೂವರು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
0Shares